ಬದುಕು ಭದ್ರವಾಗಿರಲಿ…….
Posted onಬದುಕು ಭದ್ರವಾಗಿಡುವುದು ಹೇಗೆ?
ಬದುಕು ಭದ್ರವಾಗಿಡುವುದು ಹೇಗೆ?
ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಪೂಜ್ಯ.ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನಂದಿಹಳ್ಳಿ ಮಠದ ಲಕ್ಷ್ಮಿದೇವಿ ಕೆರೆ ಲೋಕಾರ್ಪಣೆ
ಆಂತರಿಕಲೆಕ್ಕಪರಿಶೋಧಕರ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಪ್ರಗತಿಪರಿಶೀಲನಾ ಸಭೆ
ಅರಣ್ಯ ಗಿಡಗಳ ನಾಟಿ ಹಾಗೂ ಪೋಷಣೆ ಕಾರ್ಯಕ್ರಮ
ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು – ಹೆಗ್ಗಡೆಯವರು
ಲಿಂಗಸಗೂರು ತಾಲ್ಲೂಕಿನ ಅಸ್ಕಿಹಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಹಾರ ಧಾನ್ಯಗಳ ಕಿಟ್ ಮತ್ತು ಅಶಕ್ತರಿಗೆ ಉಚಿತ ಸಲಕರಣೆಗಳ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಅಸ್ಕಿಹಾಳ ಮತ್ತು ಸುತ್ತಲಿನ ಪರಿಸರದ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೈನಂದಿನ ದಿನಬಳಕೆ ಆಹಾರ ಧಾನ್ಯಗಳ ವಿಶೇಷ ಕಿಟ್ ನ್ನು ಮತ್ತು ಅಶಕ್ತರಿಗೆ ಮತ್ತು ವಿಶೇಷ ಚೇತನರಿಗೆ ಸಲಕರಣೆಗಳನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಸಂತೋಷ್ ಕುಮಾರ್ ರವರು ವಿತರಿಸಿದರು. […]
‘ವಿಶ್ವ ತಂಬಾಕು ವಿರೋಧಿ ದಿನಾಚರಣೆ’
ಕೊರೋನಾ ವಿಪತ್ತಿನ ಸಮಯ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನ ಹಸ್ತ ಚಾಚಿದೆ. ಲಿಂಗಸಗೂರು ತಾಲೂಕಿನ ವಿವಿಧ ಭಾಗಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿದ್ದವು. ಅಂದು ದುಡಿದು ಅಂದೇ ಉಣ್ಣುವ ಅನಿವಾರ್ಯತೆಯಲ್ಲಿರುವ ಇಂತಹ ಕುಟುಂಬಗಳು ಹಸಿವಿನಿಂದ ಬಾಧಿತಗೊಂಡಿದ್ದವು. ಇಂತಹ ಕುಟುಂಬಗಳನ್ನು ಗುರುತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ […]
ಲಾಕ್ ಡೌನ್ ಕಾರಣದಿಂದಾಗಿ ತಾಲ್ಲೂಕಿನಲ್ಲಿ ಸಮಸ್ಯೆಗೆ ಸಿಲುಕಿದ್ದ ಕಲಾವಿದರು ಹಾಗೂ ಸಣ್ಣ ಸಣ್ಣ ವ್ಯಾಪಾರಿ ಕುಟುಂಬಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನ ಹಸ್ತ ಚಾಚಿದೆ. ಸಂಚಾರ ಕೈಗೊಂಡು ಸಾಬೂನು ಪುಡಿ ಮಾರುತ್ತಿದ್ದ ಕುಟುಂಬಗಳು, ಪೆನ್ನು ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದ ಕುಟುಂಬಗಳು, ಪಿನ್ನುಗಳು, ಪಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಕುಟುಂಬಗಳು, ಬೀದಿ ನಾಟಕ, ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಕುಟುಂಬಗಳು ತೀರಾ ಸಂಕಷ್ಟದಲ್ಲಿದ್ದವು. ಮಾತಾ ಮಾಣಿಕೇಶ್ವರಿ ನಗರದಲ್ಲಿ ಗುಡಿಸಲಿನಲ್ಲಿ ವಾಸವಾಗಿರುವ ಈ ಕುಟುಂಬಗಳು ಆಹಾರದ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದವು. ಇತ್ತೀಚೆಗೆ […]
ಯಾದಗಿರಿ ತಾಲ್ಲೂಕಿನ ಚಿರಂಜೀವಿ ನಗರ ಸಮೀಪವಿರುವ ಕುಷ್ಠರೋಗಿ ಕಾಲೊನಿಯಲ್ಲಿ ವಾಸವಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿತರಿಸಲಾಯಿತು. ಕಾಲೊನಿಯಲ್ಲಿ ಒಟ್ಟು ಹನ್ನೆರಡು ಕುಟುಂಬಗಳು ವಾಸವಾಗಿದ್ದು ಹೆಚ್ಚಿನ ಕುಟುಂಬಗಳು ಭಿಕ್ಷೆ ಬೇಡಿ ಹೊತ್ತಿನ ಊಟ ಗಳಿಸಿಕೊಳ್ಳುತ್ತಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಧಾರ್ಮಿಕ ಕೇಂದ್ರಗಳು ಮುಚ್ಚಲ್ಪಟ್ಟಿದ್ದರಿಂದ ಜನರ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಶ್ರದ್ಧಾ ಕೇಂದ್ರಗಳಿಗೆ ಜನರು ಬಾರದೇ ಕುಷ್ಠರೋಗಿಗಳ ಭಿಕ್ಷಾಪಾತ್ರೆ ಬರಿದಾಗಿಯೇ ಉಳಿದಿತ್ತು . ದೇವಸ್ಥಾನಕ್ಕೆ ಬಂದವರು ನೀಡುವ ಹಣ್ಣು […]