ಹಲವರ ಮೌನಕ್ರಾಂತಿಯಿಂದ ಸಿರಿಧಾನ್ಯಗಳಿಗೆ ಬೆಲೆ: ಹೇಮಾವತಿ ಹೆಗ್ಗಡೆ
Posted onಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೊಗ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಸಹಕಾರದೊಂದಿಗೆ ಬೆಳ್ತಂಗಡಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ಸಿರಿ ಧಾನ್ಯಗಳ ಆಹಾರ ಮೇಳ, ಪ್ರದರ್ಶನ ಮತ್ತು ಮಾರಾಟವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಹೇಮಾವತಿ ಹೆಗ್ಗಡೆ, ಈವರೆಗೆ ಬಡವರ ಆಹಾರವಾಗಿದ್ದ ಸಿರಿಧಾನ್ಯಕ್ಕೆ ಬೆಲೆ ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದರು.