ಕಲಾವಿದರು ಹಾಗೂ ಕಿರು ವ್ಯಾಪಾರಿಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ
Posted onಲಾಕ್ ಡೌನ್ ಕಾರಣದಿಂದಾಗಿ ತಾಲ್ಲೂಕಿನಲ್ಲಿ ಸಮಸ್ಯೆಗೆ ಸಿಲುಕಿದ್ದ ಕಲಾವಿದರು ಹಾಗೂ ಸಣ್ಣ ಸಣ್ಣ ವ್ಯಾಪಾರಿ ಕುಟುಂಬಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನ ಹಸ್ತ ಚಾಚಿದೆ. ಸಂಚಾರ ಕೈಗೊಂಡು ಸಾಬೂನು ಪುಡಿ ಮಾರುತ್ತಿದ್ದ ಕುಟುಂಬಗಳು, ಪೆನ್ನು ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದ ಕುಟುಂಬಗಳು, ಪಿನ್ನುಗಳು, ಪಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಕುಟುಂಬಗಳು, ಬೀದಿ ನಾಟಕ, ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಕುಟುಂಬಗಳು ತೀರಾ ಸಂಕಷ್ಟದಲ್ಲಿದ್ದವು. ಮಾತಾ ಮಾಣಿಕೇಶ್ವರಿ ನಗರದಲ್ಲಿ ಗುಡಿಸಲಿನಲ್ಲಿ ವಾಸವಾಗಿರುವ ಈ ಕುಟುಂಬಗಳು ಆಹಾರದ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದವು. ಇತ್ತೀಚೆಗೆ […]